ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ: ಡಾ.ಎಂ.ಎನ್.ರಾಜೇಂದ್ರ ಕುಮಾರ್

Update: 2019-08-20 16:53 GMT

ಬೆಂಗಳೂರು, ಆ.20: ರಸಗೊಬ್ಬರ ಮಾರಾಟ ಮತ್ತು ವಿತರಣೆಗೆ ಪರವಾನಗಿ ಪಡೆಯಲು ಅಥವಾ ಪರವಾನಗಿಯನ್ನು ನವೀಕರಿಸಲು ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಂಘ ಹಾಗೂ ಗ್ರಾಮ ಮಟ್ಟದ ಸಹಕಾರಿ ಸಂಘಗಳಲ್ಲಿ ಕೃಷಿ ಪದವೀಧರರು ಇರಬೇಕೆಂಬ ನಿಯಮವನ್ನು ಸಡಿಲಿಸಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಮನವಿ ಮಾಡಿದ್ದಾರೆ.

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿರುವ ಅವರು, ಈ ಎರಡೂ ಸಂಘಗಳಲ್ಲಿ ಕೃಷಿ ಪದವೀಧರರು ಇಲ್ಲದಿರುವ ಹಿನ್ನೆಲೆಯಲ್ಲಿ ರಸಗೊಬ್ಬರ ಮಾರಾಟ ಮತ್ತು ವಿತರಣೆಗೆ ಹಲವಾರು ಸಂಘಗಳಿಗೆ ಅವಕಾಶ ದೊರೆಯದೇ ಸಂಘಗಳು ರಸಗೊಬ್ಬರ ಮಾರಾಟದ ತಮ್ಮ ಪ್ರಮುಖ ವ್ಯವಹಾರದಿಂದಲೇ ವಿಮುಖವಾಗುವ ಪರಿಸ್ಥಿತಿ ತಲುಪಿದೆ. ಹೀಗಾಗಿ, ಈ ನಿಯಮವನ್ನು ಸಡಿಲಿಸಿ ರೈತರ ಸೇವೆ ಮಾಡಿ ಕೊಡಲು ಅನುವು ಮಾಡಿಕೊಡುವಂತೆ ರಾಜೇಂದ್ರ ಕುಮಾರ್ ಅವರು ತಮ್ಮ ಮನವಿಯಲ್ಲಿ ವಿನಂತಿಸಿದ್ದಾರೆ. ಹಾಗೆಯೇ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲಕ್ಕೆ ಜೆನರಿಕ್ ಔಷಧಿಗಳ ವಿತರಣಾ ಏಜೆನ್ಸಿಯನ್ನೂ ನೀಡುವಂತೆಯೂ ರಾಜೇಂದ್ರ ಕುಮಾರ್ ಅವರು ಮನವಿಯಲ್ಲಿ ಕೋರಿದ್ದಾರೆ. 

ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ ದೇಣಿಗೆ 

ಇತ್ತೀಚೆಗೆ ರಾಜ್ಯದ ವಿವಿಧೆಡೆ ಮಳೆ ಮತ್ತು ನೆರೆಯಿಂದ ಸಂಭವಿಸಿದ ಪ್ರಕೃತಿ ವಿಕೋಪ ಪರಿಹಾರಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ಐವತ್ತು ಲಕ್ಷ ರೂ. ದೇಣಿಗೆ ನೀಡಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳವು ತನ್ನ ಮಂಡಳಿ ಸಭೆಯಲ್ಲಿ ನಿರ್ಧರಿಸಿದೆ ಎಂದೂ ರಾಜೇಂದ್ರ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News