​ಮಂಜೇಶ್ವರ ಚರ್ಚ್‌ಗೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ: ಬಿಷಪ್ ಖಂಡನೆ

Update: 2019-08-20 14:12 GMT

ಮಂಗಳೂರು, ಆ.20: ಮಂಗಳೂರು ಧರ್ಮಪ್ರಾಂತದ ಕಾಸರಗೋಡು ಜಿಲ್ಲೆಯ ಮರ್ಸಿಯಮ್ಮನವರ ಚರ್ಚ್‌ಗೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿ ಚರ್ಚಿಗೆ ಹಾನಿ ಮಾಡಿದ್ದಾರೆ. ಇಂತಹ ಕೃತ್ಯವನ್ನು ಸಮಾಜ ಒಪ್ಪುವುದಿಲ್ಲ ಎಂದು ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ.ಪೀಟರ್ ಪಾವ್ಲ್ ಸಲ್ಡಾನ್ಹ ಖಂಡಿಸಿದ್ದಾರೆ.

ದುಷ್ಕರ್ಮಿಗಳು ಕಲ್ಲು ತೂರಾಟ ಮಾಡುವ ಮೂಲಕ ಸಾರ್ವಜನಿಕ ಶಾಂತಿಯನ್ನು ಕದಡುವ ಯತ್ನಿಸಿದ್ದಾರೆ. ಈ ಕೃತ್ಯವನ್ನು ನಾನು ಖಂಡಿಸುತ್ತೇನೆ. ಆದಷ್ಟು ಬೇಗ ಪೊಲೀಸ್ ಇಲಾಖೆ ತಪ್ಪಿತಸ್ಥ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಜರುಗಿಸಬೇಕು ಎಂದು ಬಿಷಪ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News