ಉಡುಪಿ ತಾಪಂನಲ್ಲಿ ಡಿ.ದೇವರಾಜ ಅರಸು ಜನ್ಮ ದಿನಾಚರಣೆ

Update: 2019-08-20 15:46 GMT

ಉಡುಪಿ, ಆ.20: ಡಿ.ದೇವರಾಜ ಅರಸು ಜನ್ಮ ದಿನಾಚರಣೆಯನ್ನು ಉಡುಪಿ ತಾಲೂಕುಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಆಚರಿಸ ಲಾಯಿತು. ತಾಪಂ ಅಧ್ಯಕ್ಷೆ ನೀತಾ ಗುರುರಾಜ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಉಡುಪಿ ತಾಪಂ ಉಪಾಧ್ಯಕ್ಷ ಭುಜಂಗ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ನಡೆಸಲಾದ ಆಟೋಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀತಾ ಗುರುರಾಜ ವಿತರಿಸಿದರು.

ಮುಖ್ಯ ಅತಿಥಿಗಳಾಗಿ ಉಡುಪಿ ತಾಪಂ ಉಪ್ಯಾಕ್ಷುಜಂಗ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ನಡೆಸಲಾದ ಆಟೋಟ ಮತ್ತು ಸಾಂಸ್ಕೃತಿಕ ರ್ಸ್ಪೆಯಲ್ಲಿಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀತಾ ಗುರುರಾಜ ವಿತರಿಸಿದರು.

ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಗಿರಿಧರ ಗಾಣಿಗ ಸ್ವಾಗತಿಸಿ, ಅನ್ನಪೂರ್ಣ ಕಾರ್ಯಕ್ರಮ ನಿರೂಪಿಸಿದರು. ಬ್ರಹ್ಮಾವರ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ಆಶಾದೇವಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News