ಮಂತ್ರಿ ಸ್ಥಾನ ಸಿಗದಿದ್ದರೆ ನನ್ನ ನಡೆ ಮನೆ ಕಡೆಗೆ: ಉಮೇಶ್ ಕತ್ತಿ

Update: 2019-08-21 12:48 GMT

ಬೆಂಗಳೂರು, ಆ. 21: ಮುಂದಿನ ಸಚಿವ ಸಂಪುಟ ವಿಸ್ತರಣೆ ಒಳಗೆ ನನಗೆ ಮಂತ್ರಿ ಸ್ಥಾನ ಸಿಗದಿದ್ದರೆ ನನ್ನ ನಡೆ ಮನೆ ಕಡೆಗೆ’ ಎಂದು ಹುಕ್ಕೇರಿ ಕ್ಷೇತ್ರದ ಶಾಸಕ ಉಮೇಶ್ ಕತ್ತಿ, ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದು, ಆ ಮೂಲಕ ತನ್ನ ಅಸಮಾಧಾನ ಹೊರಹಾಕಿದ್ದಾರೆ.

ಬುಧವಾರ ನಗರದಲ್ಲಿ ಅಸಮಾಧಾನಿತ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ತನ್ನ ಶಕ್ತಿ ಕುಗ್ಗಿಸುವ ಕೆಲಸ ಮಾಡುತ್ತಿದ್ದು, ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಗುಡುಗಿದರು.

ಇದೇ ವೇಳೆ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿದ ಉಮೇಶ್ ಕತ್ತಿ, ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಮರಳಿ ಮನೆಗೆ(ಜೆಡಿಎಸ್) ಬರುವಂತೆ ಹೊರಟ್ಟಿ ಆಹ್ವಾನಿಸಿದ್ದಾರೆಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News