ಗೋಹತ್ಯೆ ನಿಷೇಧ ಕಾನೂನು ಕೂಡಲೇ ಜಾರಿಯಾಗಲಿ: ಬಿಜೆಪಿ ಶಾಸಕ ಯತ್ನಾಳ್

Update: 2019-08-21 12:51 GMT

ಬೆಂಗಳೂರು, ಆ.21: ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇದ ಕಾನೂನನ್ನು ಜಾರಿಗೆ ತರುವುದು ಮತ್ತು ಅನಧಿಕೃತವಾಗಿ ನಡೆಯುತ್ತಿರುವ ಕಸಾಯಿಖಾನೆಗಳನ್ನು ಗುರುತಿಸಿ ಅವುಗಳನ್ನು ಕೂಡಲೇ ತೆರವುಗೊಳಿಸುವಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಗೋವುಗಳ ಕಳ್ಳಸಾಗಾಣಿಕೆ ಮಾಡಿ ಹತ್ಯೆ ನಡೆಯುತ್ತಿದ್ದು, ಗೋವುಗಳನ್ನು ರಕ್ಷಿಸಲು ಹೋದ ಗೋರಕ್ಷಕರನ್ನು ಕೊಲೆ ಮಾಡಿರುವ ಘಟನೆಗಳು ರಾಜ್ಯದಲ್ಲಿ ಸಾಕಷ್ಟು ನಡೆಯುತ್ತಿವೆ. ಹಾಗೂ ಹಲವಾರು ಭಾಗಗಳಲ್ಲಿ ಯಾವುದೇ ಪರವಾನಿಗೆಯನ್ನು ಪಡೆಯದೆ ಅನಧಿಕೃತವಾಗಿ ಕಸಾಯಿಖಾನೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಗೋರಕ್ಷಣೆ ಮಾಡುತ್ತಿರುವವರಿಗೆ ಕಾನೂನು ರಕ್ಷಣೆ ನೀಡಬೇಕು. ಹಾಗೂ ಅಕ್ರಮ ಕಸಾಯಿಖಾನೆಗಳನ್ನು ಕೂಡಲೇ ತೆರವುಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಪತ್ರಿಕೆ ಪ್ರಕಟನೆಯ ಮೂಲಕ ಬಿ.ಎಸ್.ಯಡಿಯೂರಪ್ಪಗೆ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News