ದ.ಕ. ಜಿಲ್ಲೆಗೆ 65 ಕೋ.ರೂ.ಪರಿಹಾರಕ್ಕೆ ಪ್ರಸ್ತಾವನೆ: ಡಾ. ಆರ್. ಸೆಲ್ವಮಣಿ

Update: 2019-08-21 15:16 GMT

ನಾರಾವಿ, ಆ.21: ಪತ್ರಕರ್ತರ ಗ್ರಾಮವಾಸ್ತವ್ಯದ ಬಳಿಕ ಕುಗ್ರಾಮ ಕುತ್ಲೂರಿಗೆ ಪರಿವರ್ತನೆಯ ಅವಕಾಶ ಲಭಿಸಿದೆ. ಅಧಿಕಾರಿಗಳು ಹಾಗೂ ಸಂಸ್ಥೆಗಳ ಸಹಕಾರದಲ್ಲಿ ಈ ಶಾಲೆಯ ಹಲವು ಬೇಡಿಕೆಗಳನ್ನು ಈಡೇರಿಸಿರುವ ಪತ್ರಕರ್ತರು ಉಳಿದ ಬೇಡಿಕೆಗಳನ್ನು ಈಡೇರಿಸುವ ವಿಶ್ವಾಸವಿದೆ. ಮಳೆಹಾನಿಗೆ ಸಂಬಂಧಿಸಿ ಜಿಲ್ಲೆಯಲ್ಲಿ 65 ಕೋ.ರೂ. ನಷ್ಟವಾಗಿರುವ ಬಗ್ಗೆ ಅಂದಾಜುಪಟ್ಟಿ ತಯಾರಿಸಿ ಪರಿಹಾರಕ್ಕಾಗಿ ಸರಕಾರಕ್ಕೆ ಕಳುಹಿಸಿಕೊಡಲಾಗಿದೆ ಎಂದು ದ.ಕ. ಜಿಪಂ ಸಿಇಒ ಡಾ. ಆರ್. ಸೆಲ್ವಮಣಿ ಹೇಳಿದರು.

ಕುತ್ಲೂರು ಸ.ಹಿ.ಪ್ರಾ. ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕುತ್ಲೂರು ಸ.ಹಿ.ಪ್ರಾ. ಶಾಲೆ ಶಾಲಾಭಿವೃದ್ಧಿ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬುಧವಾರ ಜರುಗಿದ ಶಾಲಾ ಅಕ್ಷರ ಕೈತೋಟ, ವಾಚನಾಲಯ, ಕಂಪ್ಯೂಟರ್ ತರಗತಿ ಹಾಗೂ ವಲಯ ಮಟ್ಟದ ಕಬಡ್ಡಿ ಪಂದ್ಯದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ನಾರಾವಿ ಗ್ರಾಪಂ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು ಅಧ್ಯಕ್ಷತೆ ವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೈ. ಶಿವರಾಮಯ್ಯ, ದ.ಕ. ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ, ಕೇಂದ್ರ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಪತ್ರಿಕಾ ಭವನ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಎನ್. ಪೂವಣಿ, ಬೆಳ್ತಂಗಡಿ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಗಣೇಶ್ ಐತಾಳ್, ಕುತ್ಲೂರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಪ್ರಭಾಕರ ದೇವಾಡಿಗ, ನಾರಾವಿ ಗ್ರಾಪಂ ಉಪಾಧ್ಯಕ್ಷೆ ಯಶೋದ, ಶಿಕ್ಷಣ ಇಲಾಖೆಯ ಸಿಆರ್‌ಪಿ ಸಂತೋಷ್, ನಾರಾವಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ರವಿ, ಕಾರ್ಯದರ್ಶಿ ನಿರ್ಮಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ರಾಮಚಂದ್ರ ಭಟ್ ಕುತ್ಲೂರು ಪ್ರಾಸ್ತಾವಿಸಿದರು. ಕುತ್ಲೂರು ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಪ್ರಶಾಂತ್ ಸ್ವಾಗತಿಸಿದರು. ಶಿಕ್ಷಕಿ ರೂಪಾ ಕುಮಾರಿ ವಂದಿಸಿದರು.ಶಿಕ್ಷಕ ಸುರೇಶ್ ಕಾರ್ಯಕ್ರಮ ರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News