ಅನರ್ಹ ಶಾಸಕರಿಗೆ ಕಾಲವೇ ಉತ್ತರಿಸುತ್ತದೆ: ಡಿ.ಕೆ.ಶಿವಕುಮಾರ್

Update: 2019-08-21 15:53 GMT

ಬೆಂಗಳೂರು, ಆ.21: ಕಾಂಗ್ರೆಸ್ ಮತ್ತು ಜೆಡಿಎಸ್‌ನ ಅನರ್ಹ ಶಾಸಕರು ದೆಹಲಿಗೆ ಹೋಗಿದ್ದಾರೆ. ಅಲ್ಲಿ ಯಾರನ್ನೇ ಭೇಟಿಯಾಗಲಿ, ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತದೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. 

ಬುಧವಾರ ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅನರ್ಹ ಶಾಸಕರಿಗೆ ಶುಭವಾಗಲಿ. ಶುಭ ಗಳಿಗೆಯಲ್ಲಿ, ಶುಭ ಮುಹೂರ್ತದಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಸ್ಥಾಪನೆ ಮಾಡಿದ್ದಾರೆ. ಇವರ ಈ ನಡೆಗೆ ಮುಂದಿನ ದಿನಗಳಲ್ಲಿ ಕಾಲವೇ ಸರಿಯಾದ ಉತ್ತರ ಕೊಡಲಿದೆ ಎಂದರು.

ಅನರ್ಹ ಶಾಸಕರು ಯಡಿಯೂರಪ್ಪಗೆ ಶುಕ್ರ ಬಲ, ರಾಜಯೋಗ ಎಲ್ಲವನ್ನೂ ತಂದುಕೊಟ್ಟಿದ್ದಾರೆ. ಯಡಿಯೂರಪ್ಪನವರ ಕನಸನ್ನು ನನಸು ಮಾಡಿದ್ದಾರೆ. ಅವರಿಗೆಲ್ಲ ಶುಭವಾಗಲಿ ಎಂದು ಅವರು ವ್ಯಂಗ್ಯವಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News