ವೃದ್ಧಾಶ್ರಮ ಪ್ರಾರಂಭಿಸಲು ಅರ್ಜಿ ಆಹ್ವಾನ
Update: 2019-08-21 16:20 GMT
ಮಂಗಳೂರು, ಆ.21: ದ.ಕ.ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪುತ್ತೂರು ಉಪವಿಭಾಗದಲ್ಲಿ ವೃದ್ಧಾಶ್ರಮ ಪ್ರಾರಂಭಿಸಲು ಅರ್ಹ ನೋಂದಾಯಿತ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆ.30 ಕೊನೆಯ ದಿನವಾಗಿದ್ದು, ಅರ್ಜಿ ಹಾಗೂ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯ ಕಚೇರಿ (ದೂ.ಸಂ: 0824-2458173/2455999)ಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.