ಹಣ ಕೊಡಲು ನಿರಾಕರಿಸಿದ ತಂದೆಗೆ ಕೊಡಲಿಯಿಂದ ಇರಿದ ಪುತ್ರ

Update: 2019-08-21 16:24 GMT

ಶಿವಮೊಗ್ಗ, ಆ. 21: ಹಣ ನೀಡಲು ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡ ಪುತ್ರನೋರ್ವ ತನ್ನ ತಂದೆಯ ಮೇಲೆ ಕೊಡಲಿಯಿಂದ ಹೊಡೆದು ಗಾಯಗೊಳಿಸಿದ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಮದ ಜಂಬಳ್ಳಿಯಲ್ಲಿ ನಡೆದಿದೆ. 

ಶ್ರೀಕಾಂತ್ ಕುಲಾಲ್ (30) ಆರೋಪಿತ ಪುತ್ರ. ತಂದೆ ಕೃಷ್ಣ ಕುಲಾಲ್ ಹಲ್ಲೆಗೊಳಗಾದವರಾಗಿದ್ದಾರೆ. ಇವರ ತಲೆಯ ಹಿಂಭಾಗಕ್ಕೆ ಗಂಭೀರ ಸ್ವರೂಪದ ಪೆಟ್ಟು ಬಿದ್ದಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಇವರಿಗೆ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಆರೋಪಿ ಶ್ರೀಕಾಂತ್ ಕುಲಾಲ್‍ನ್ನು ಪೊಲೀಸರು ಬಂಧಿಸಿ, ಕೊಲೆ ಯತ್ನದ ಪ್ರಕರಣದಡಿ ಕೇಸ್ ದಾಖಲಿಸಿಕೊಂಡಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಧೀಶರ ಸೂಚನೆಯಂತೆ ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News