ರಿಕ್ಷಾ ಚಾಲಕರ ವಿರುದ್ಧ ದೂರು; ಸಭೆ

Update: 2019-08-21 16:28 GMT

ಉಡುಪಿ, ಆ.21: ಉಡುಪಿ ಜಿಲ್ಲೆಯಾದ್ಯಂತ ಆಟೋರಿಕ್ಷಾಗಳಲ್ಲಿ ಮೀಟರ್ ಅಳವಡಿಸುವಿಕೆ, ಸಾರ್ವಜನಿಕ ಪ್ರಯಾಣಿಕರೊಂದಿಗೆ ಅನುಚಿತ ವರ್ತನೆ ಹಾಗೂ ಇನ್ನಿತರ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಆ.26ರಂದು ಬೆಳಗ್ಗೆ 11:30ಕ್ಕೆ ಮಣಿಪಾಲದಲ್ಲಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಾರಿಗೆ ಸೌಧದ ಸಭಾಂಗಣದಲ್ಲಿ ಸಭೆಯೊಂದನ್ನು ಕರೆಯಲಾಗಿದೆ.

ಇದರಲ್ಲಿ ಜಿಲ್ಲೆಯ ಎಲ್ಲಾ ಆಟೋರಿಕ್ಷಾ ಚಾಲಕ/ ಮಾಲಕ ಸಂಘಟನೆಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಅವರ ಪ್ರತಿನಿಧಿಗಳು ಭಾಗವಹಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News