ಆರೂರು: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Update: 2019-08-21 16:29 GMT

ಉಡುಪಿ, ಆ.21:ಚೇರ್ಕಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಮಂಗಳವಾರ ಆರೂರು ಶ್ರೀವಿಷ್ಣುಮೂರ್ತಿ ಹಿರಿು ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಉಡುಪಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ದರು. ಸ್ಥಳೀಯ ಗ್ರಾಪಂ ಅಧ್ಯಕ್ಷ ರಾಜೀ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ತಾಪಂ ಮಾಜಿ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಚೇರ್ಕಾಡಿ ಗ್ರಾಪಂ ಅಧ್ಯಕ್ಷ ಹರೀಶ್ ಶೆಟ್ಟಿ, ಆರೂರು ಶ್ರೀವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ.ಪಿ.ರಾಘವೇಂದ್ರ ರಾವ್, ಆರೂರು ಶ್ರೀ ಎಂಎಸ್ ವಿಎಂ ಹಿ.ಪ್ರಾ ಶಾಲೆ ಸಂಚಾಲಕ ಎ.ಎಂ ಮೋಹನ್‌ ರಾವ್, ಗ್ರಾಪಂ ಸದಸ್ಯ ಗುರುರಾಜ್ ರಾವ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಬಾಳಿಗ ಮತ್ತು ಶಿಕ್ಷಣ ಇಲಾಖಾಧಿಕಾರಿ ಲಕ್ಷ್ಮೀ ಉಪಸ್ಥಿತರಿದ್ದರು.

ಸಿಆರ್‌ಪಿ ಅಶ್ವಿನಿ ಬಾಯರಿ ಪ್ರಾಸ್ತಾವಿಕವಾಗಿ ಭಾಷಣ ಮಾಡಿದರು. ಶಾಲಾ ಮುಖ್ಯೋಪಾಧ್ಯಾಯ ಸಂದೀಪ್‌ಕುಮಾರ್ ಹೆಗ್ಡೆ ಸ್ವಾಗತಿಸಿದರು. ಜಯಶೀಲಾ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಹ ಶಿಕ್ಷಕ ಸತೀಶ್ ಶೆಟ್ಟಿ ವಂದಿಸಿದರು. ಕಾರ್ಯಕ್ರಮದಲ್ಲಿ ಕ್ಲಸ್ಟರ್‌ನ 13 ಶಾಲೆಗಳ 600 ವಿದ್ಯಾರ್ಥಿಗಳು, 150ಕ್ಕೂ ಹೆಚ್ಚು ಶಿಕ್ಷಕರು ಬಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News