ಕೋಟ ಜೋಡಿ ಕೊಲೆ: ನಾಲ್ವರು ಆರೋಪಿಗಳಿಗೆ ಜಾಮೀನು ತಿರಸ್ಕೃತ

Update: 2019-08-21 16:35 GMT

ಉಡುಪಿ, ಆ.21: ಕೋಟ ಜೋಡಿ ಕೊಲೆ ಪ್ರಕರಣದ ನಾಲ್ವರು ಆರೋಪಿ ಗಳ ಜಾಮೀನು ಅರ್ಜಿಯನ್ನು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿ ಇಂದು ಆದೇಶ ನೀಡಿದೆ.

ಹರೀಶ್ ರೆಡ್ಡಿ, ಶಂಕರ್ ಮೊಗವೀರ, ರತೀಶ್ ಎಂ.ಕರ್ಕೇರ, ಪ್ರವೀಣ್ ಶೆಟ್ಟಿ ಎಂಬವರು ಜಾಮೀನು ಅರ್ಜಿ ತಿರಸ್ಕೃತಗೊಂಡ ಆರೋಪಿ ಗಳಾಗಿದ್ದಾರೆ. ಇವರು ಇತ್ತೀಚೆಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ವೇಳೆ ಕುಂದಾಪುರ ಜಿಲ್ಲಾ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಿದ್ದರು.

ಈ ಬಗ್ಗೆ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ಸಿ.ಎಂ.ಜೋಷಿ ನಾಲ್ವರು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದರು. ಜ.26ರಂದು ರಾತ್ರಿ ಯತೀಶ್ ಕಾಂಚನ್ ಹಾಗೂ ಭರತ್ ಎಂಬವರನ್ನು ತಂಡ ಮಾರಕಾಸ್ತ್ರದಿಂದ ಕೊಲೆ ಮಾಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News