ಅಂಬರ್‌ವ್ಯಾಲಿ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆ

Update: 2019-08-21 16:41 GMT

ಕೈರಂಗಳ, ಆ.21: ವಿದ್ಯಾನಗರದ ಅಂಬರ್‌ವ್ಯಾಲಿ ಆಂಗ್ಲ ಮಾಧ್ಯಮ ಶಾಲೆಯ 2019-20ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಶಾಲಾ ಆವರಣದಲ್ಲಿ ನಡೆಯಿತು.

ಶಾಲೆಯ ಆಡಳಿತಾಧಿಕಾರಿ ಅಬ್ದುಲ್ ರಹ್ಮಾನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವೃತ್ತ ನಿರೀಕ್ಷಕ ರವಿನಾಯ್ಕ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಸ್ತಿನ ಬಗ್ಗೆ ಅರಿವು ಮೂಡಿಸಿದ್ದು, ಸಾಮಾಜಿಕ ಸಮಸ್ಯೆ ಮತ್ತು ಸಾರ್ವಜನಿಕರ ಬದ್ಧತೆಯ ಕುರಿತು ಜಾಗೃತಿ ಮೂಡಿಸಿದರು. ಬಳಿಕ ಶಾಲಾ ಪದಾಧಿಕಾರಿಗಳಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿಯನ್ನು ಹಸ್ತಾಂತರಿಸಿದರು. ಈ ಸಂದರ್ಭ ಪದಾಧಿಕಾರಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

ಕಾರ್ಯಕ್ರಮದಲ್ಲಿ ಪಿ.ಟಿ.ಎ. ಅಧ್ಯಕ್ಷ ಹೈದರ್, ಸಹ ಶಿಕ್ಷಕರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ರಾಫಿದ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯ ಜಿ.ಎಮ್. ಅಕ್ರಮ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News