ಎಕ್ಕಾರು : ಕಾಂಕ್ರೀಟ್ ರಸ್ತೆ ಉದ್ಘಾಟನೆ
Update: 2019-08-21 17:00 GMT
ಎಕ್ಕಾರು : ಎಕ್ಕಾರು ದುರ್ಗಾ ನಗರದಿಂದ ಕೆಳಗಿನ ಮಾಲೇವು ರಸ್ತೆಯು ಸುಮಾರು 12 ಲಕ್ಷ ರೂ. ಗಳಲ್ಲಿ ಕಾಂಕ್ರಿಟೀಕರಣಗೊಂಡಿದ್ದು ಇದರ ಉದ್ಘಾಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಸಂಜೆ ನೆರವೇರಿಸಿದರು.
ಈ ಸಂದರ್ಭ ಮುಲ್ಕಿ ಮೂಡಬಿದಿರೆ ಬಿಜೆಪಿ ಮಂಡಲದ ಈಶ್ವರ್ ಕಟೀಲ್, ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಎಕ್ಕಾರು ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಶೆಟ್ಟಿ ಎಕ್ಕಾರು, ಗ್ರಾ.ಪಂ. ಉಪಾಧ್ಯಕ್ಷೆ ಸುಜಾತ, ಪಂಚಾಯತ್ ಸದಸ್ಯರುಗಳಾದ ಪ್ರಕಾಶ್ ಕುಕ್ಯಾನ್, ಸುದೀಪ್ ಅಮೀನ್, ಶೀಲಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು