ನಿಲ್ಲಿಸಿದ್ದ ಕಾರಿಗೆ ಬೆಂಕಿ: ತಪ್ಪಿದ ಭಾರೀ ಅನಾಹುತ

Update: 2019-08-22 11:59 GMT

ಮಡಿಕೇರಿ, ಆ.22: ನಗರದ ಕೋಟೆ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರು ಅಗ್ನಿ ಆಕಸ್ಮಿಕದಿಂದ ಹಾನಿಗೀಡಾದ ಘಟನೆ ಇಂದು ನಡೆದಿದೆ. ಕಾರಿನಲ್ಲಿ ಯಾರೂ ಇಲ್ಲದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. 

ಝಾಹಿರ್ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. 

ಘಟನೆ ನಡೆದ ತಕ್ಷಣ ಸಾರ್ವಜನಿಕರು ನೀರು ಹಾಕಿದರಾದರೂ ಬೆಂಕಿ ನಿಯಂತ್ರಣಕ್ಕೆ ಬರಲಿಲ್ಲ. ನಂತರ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಹೆಚ್ಚು ಹಾನಿಯಾಗುವುದನ್ನು ತಪ್ಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News