ನನ್ನ ವಿರುದ್ಧದ ಆರೋಪಗಳೆಲ್ಲವು ಸತ್ಯಕ್ಕೆ ದೂರವಾದುದು: ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ

Update: 2019-08-22 13:20 GMT

ಹೊಸದಿಲ್ಲಿ, ಆ. 22:ನನ್ನ ವಿರುದ್ಧದ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾದುದು.  ನಾನು ಸಿಬಿಐನ  ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ನನ್ನ ಮತ್ತು ಮಗನ ಬ್ಯಾಂಕ್ ಖಾತೆಗಳ ಬಗ್ಗೆ ವಿವರ ಕೇಳಿದ್ದಾರೆ. ವಿದೇಶದಲ್ಲಿ  ನನ್ನ ಯಾವುದೇ ಬ್ಯಾಂಕ್ ಖಾತೆ ಇಲ್ಲ. ನನ್ನ ಮಗ ಕಾರ್ತಿ ಹೆಸರಿನಲ್ಲಿ ವಿದೇಶದಲ್ಲಿ ಬ್ಯಾಂಕ್ ಖಾತೆ ಇದೆ  ಎಂದು ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಸಿಬಿಐ ವಿಶೇಷ ನ್ಯಾಯಾಲಯಕ್ಕೆ  ವಿಚಾರಣೆ ಹೇಳಿಕೆ ನೀಡಿದರು.

ಐಎನ್ ಎಕ್ಸ್ ಮೀಡಿಯಾ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಇಂದು ಸಿಬಿಐ ಅಧಿಕಾರಿಗಳು  ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಸಿಬಿಐ ಪರ ವಾದ ಮಂಡಿಸಿದ ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ   ಅವರು ಪ್ರಕರಣ ಕುರಿತು ಮಾಜಿ ಸಚಿವರು ತನಿಖೆಗೆ ಸಹಕರಿಸುತ್ತಿಲ್ಲ. ತನಿಖೆಗೆ ಐದು ದಿನಗಳ ಸಿಬಿಐ ವಶಕ್ಕೆ ಒಪ್ಪಿಸುವಂತೆ  ನ್ಯಾಯಾಲಯಕ್ಕೆ ಮನವಿ ಮಾಡಿದರು.

ಚಿದಂಬರಂ ಪರ  ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಘ್ವಿ  ವಾದ ಮಂಡಿಸಿದರು.

ಪಿ. ಚಿದಂಬರಂ ಪತ್ನಿ ನಳಿನಿ ಹಾಗೂ ಮಗ  ಕಾರ್ತಿ ಚಿದಂಬರಂ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News