ಸಂತ್ರಸ್ತರಿಗೆ ವೈದ್ಯಕೀಯ ನೆರವು ಒದಗಿಸಲು ಎಚ್‌ಡಿಕೆ ಮನವಿ

Update: 2019-08-22 14:24 GMT

ಬೆಂಗಳೂರು, ಆ.22: ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವೆ. ಪ್ರವಾಹ ಬಂದು ಹಲವಾರು ಹಳ್ಳಿಗಳು ಕೆಸರುಮಯವಾಗಿದ್ದು, ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಆದುದರಿಂದ, ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಸಂತ್ರಸ್ತರಿಗೆ ವೈದ್ಯಕೀಯ ನೆರವು ನೀಡಬೇಕೆಂದು ನಾಡಿನ ಸಮಸ್ತ ವೈದ್ಯರಲ್ಲಿ ಕೇಳಿಕೊಳ್ಳುತ್ತಿದ್ದೇನೆ. ಪ್ರವಾಹ ಪೀಡಿತ ಹಳ್ಳಿಗಳಿಗೆ ತೆರಳುವ ವೈದ್ಯರು ಹಾಗೂ ದಾದಿಯರಿಗೆ ಈ ಕುರಿತು ಅನುಕೂಲಗಳನ್ನು ಒದಗಿಸಬೇಕೆಂದು ರಾಜ್ಯ ಸರಕಾರಕ್ಕೂ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News