ಉಡುಪಿ ಕೆಥೊಲಿಕ್ ಸಭಾದಿಂದ ನೆರೆ ಸಂತ್ರಸ್ತರಿಗೆ ನೆರವು

Update: 2019-08-22 15:11 GMT

ಉಡುಪಿ, ಆ.22: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ಸಂಗ್ರಹಿಸಲಾದ 40ಲಕ್ಷ ರೂ. ಮೌಲ್ಯದ ಅಗತ್ಯ ವಸ್ತುಗಳನ್ನು ಗುರುವಾರ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಪ್ರವಾಹದಿಂದ ತತ್ತರಿಸಿರುವ ಸಂತ್ರಸ್ತರಿಗೆ ಕಳುಹಿಸಲಾಯಿತು.

ಉಡುಪಿ ವಲಯ ಪ್ರಧಾನ ಧರ್ಮಗುರು ಹಾಗೂ ಉಡುಪಿ ಶೋಕಮಾತಾ ಇಗರ್ಜಿಯ ಪ್ರಧಾನ ಧರ್ಮಗುರು ವಂ.ವಲೇರಿಯನ್ ಮೆಂಡೊನ್ಸಾ ಪರಿಹಾರ ಸಾಮಾಗ್ರಿಗಳನ್ನು ಹೊತ್ತ ಲಾರಿಗಳಿಗೆ ಉಡುಪಿ ಚರ್ಚಿನ ಬಳಿ ಹಸಿರು ನಿಶಾನೆ ತೋರಿದರು.

ಉಡುಪಿ ಧರ್ಮಪ್ರಾಂತದ ಎಲ್ಲಾ ಚರ್ಚುಗಳಿಂದ ಸಂತ್ರಸ್ಥರ ಅಗತ್ಯ ಬಳಕೆಗೆ ಬೇಕಾದ ಬಟ್ಟೆ, ನೀರು, ಅಕ್ಕಿ, ದಿನೋಪಯೋಗಿ ವಸ್ತುಗಳು, ಔಷಧಿ, ಹಿಟ್ಟು, ಬೇಳೆ, ಬಿಸ್ಕತ್, ಚಾಪೆ, ಅಡುಗೆ ಎಣ್ಣೆ, ನೀರಿನ ಬಾಟೆಲ್, ಸೋಪು, ಚಹಾ ಪುಡಿ ಸೇರಿದಂತೆ 40 ಲಕ್ಷ ರೂ. ಮೌಲ್ಯದ ನೆರವು ನೀಡಿದ್ದಾರೆ. ಉಡುಪಿ ಧರ್ಮಪ್ರಾಂತದ ಐದು ವಲಯಗಳಾದ ಉಡುಪಿ, ಶಿರ್ವ, ಕಾರ್ಕಳ, ಕುಂದಾಪುರ ಮತ್ತು ಕಲ್ಯಾಣಪುರ ವಲಯದ ಕೆಥೊಲಿಕ್ ಸಭಾ ಘಟಕಗಳು ವಸ್ತುಗಳ ಸಂಗ್ರಹಕ್ಕೆ ಸಹಕಾರ ನೀಡಿವೆ.

ಸಂಗ್ರಹಿಸಿದ ವಸ್ತುಗಳನ್ನು ಕಾರವಾರ, ಶಿವಮೊಗ್ಗ, ಬೆಳಗಾವಿ ಮತ್ತು ಬಿಜಾಪುರ ಜಿಲ್ಲೆಗಳಿಗೆ ಸ್ವತಃ ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಪ್ರತಿನಿಧಿಗಳು ತೆರಳಿ ನೆರೆಪೀಡಿತ ಸಂತ್ರಸ್ತರಿಗೆ ಹಸ್ತಾಂತರಿಸಲಿದ್ದಾರೆ.

ಕೆಥೊಲಿಕ್ ಸಭಾ ಆಧ್ಯಾತ್ಮಿಕ ನಿರ್ದೇಶಕ ವಂ.ಫರ್ಡಿನಾಂಡ್ ಗೊನ್ಸಾಲ್ವಿಸ್, ಧರ್ಮಪ್ರಾಂತದ ಎಸ್ಟೇಟ್ ಮ್ಯಾನೇಜರ್ ವಂ.ರೋಮಿಯೊ ಲೂವಿಸ್, ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಉಪಾಧ್ಯಕ್ಷ ಫ್ಲೈವನ್ ಡಿಸೋಜ, ಕಾರ್ಯದರ್ಶಿ ಸಂತೋಷ್ ಕರ್ನೆಲಿಯೋ, ಮಾಜಿ ಅಧ್ಯಕ್ಷರಾದ ವಲೇರಿಯನ್ ಫೆರ್ನಾಂಡಿಸ್, ಆಲ್ಫೋನ್ಸ್ ಡಿಕೋಸ್ತಾ, ಪದಾಧಿಕಾರಿಗಳಾದ ಗ್ರೆಗೋರಿ ಪಿಕೆ ಡಿಸೋಜ, ಲೂಯಿಸ್ ಡಿಸೋಜ, ರೊನಾಲ್ಡ್ ಡಿಆಲ್ಮೇಡಾ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News