ಬಂಟ್ವಾಳ: ಅಪಘಾತದ ಗಾಯಾಳು ಸಾವು

Update: 2019-08-22 17:19 GMT

ಬಂಟ್ವಾಳ, ಆ. 22: ಕಳೆದ ಸೋಮವಾರ ಸಂಜೆ ಸುರತ್ಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತದಿಂದ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಂಟ್ವಾಳ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಮೃತರನ್ನು ಇಲ್ಲಿನ ಪಾಣೆಮಂಗಳೂರು ಸಮೀಪದ ಶೇಡಿಗುರಿ ಕೊಂಕಂದಿಪಾಲು ನಿವಾಸಿ ದಿ. ಧರ್ಣಪ್ಪ ಸಪಲ್ಯ ಎಂಬವರ ಪುತ್ರ ಲೋಕೇಶ ಸಪಲ್ಯ (34) ಎಂದು ಗುರುತಿಸಲಾಗಿದೆ.

ಕಳೆದ ಸೋಮವಾರ ಸಂಜೆ ಸುರತ್ಕಲ್ ಎನ್‍ಐಟಿಕೆ ಬಳಿ ಸೆಂಟ್ರಿಂಗ್ ಕೆಲಸ ಮುಗಿಸಿ ತನ್ನ ಬೈಕಿನಲ್ಲಿ ಮನೆಗೆ ವಾಪಸು ಬರುತ್ತಿದ್ದ ವೇಳೆ ಇನ್ನೊಂದು ಬೈಕಿಗೆ ಢಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ತಡರಾತ್ರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಗುರುವಾರ ಬೆಳಿಗ್ಗೆ ಮನೆ ಸಮೀಪದ ಮೃತರ ಅಂತ್ಯಕ್ರಿಯೆ ನಡೆಯಿತು. ಮೃತರು ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News