ಆರ್ಥಿಕ ಹಿಂಜರಿತ: ಮೋದಿ ಸರಕಾರವು ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಕೇಜ್ರಿವಾಲ್ ವಿಶ್ವಾಸ

Update: 2019-08-23 18:35 GMT

 ಹೊಸದಿಲ್ಲಿ,ಆ.23: ಪ್ರಸಕ್ತ ಆರ್ಥಿಕ ಹಿಂಜರಿತವನ್ನು ನಿಭಾಯಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ದೃಢವಾದ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ತನಗೆ ಸಂಪೂರ್ಣ ವಿಶ್ವಾಸವಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶುಕ್ರವಾರ ಹೇಳಿದ್ದಾರೆ.

ಈಗಿನ ಪರಿಸ್ಥಿತಿಯಲ್ಲಿ ದೇಶವು ಒಂದಾಗಿ ನಿಲ್ಲಬೇಕು ಮತ್ತು ಆರ್ಥಿಕತೆಗೆ ಆಗಿರುವ ಹಾನಿಯನ್ನು ಸರಿಪಡಿಸಬೇಕು. ಆರ್ಥಿಕತೆಯನ್ನು ಮರಳಿ ಹಳಿಗೆ ತರಲು ಕೇಂದ್ರವು ಕೈಗೊಳ್ಳುವ ಯಾವುದೇ ಕ್ರಮವನ್ನು ದಿಲ್ಲಿ ಸರಕಾರವು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಉದ್ಯೋಗ ನಷ್ಟಗಳ ಬಗ್ಗೆ ತಾನು ವೈಯಕ್ತಿಕವಾಗಿ ಚಿಂತಿತನಾಗಿದ್ದೇನೆ ಎಂದು ಇಲ್ಲಿ ಕಾರ್ಯಕ್ರಮವೊಂದರ ನೇಪಥ್ಯದಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಕೇಜ್ರಿವಾಲ್ ತಿಳಿಸಿದರು.

 ವಿಶೇಷವಾಗಿ ವಾಹನ,ಜವುಳಿ, ರಿಯಲ್ ಎಸ್ಟೇಟ್ ಮತ್ತು ಇತರ ಕ್ಷೇತ್ರಗಳಲ್ಲಿ ಹಿಂಜರಿತವು ತೀವ್ರಗೊಳ್ಳುತ್ತಿರುವುದು ಅತ್ಯಂತ ಕಳವಳದ ವಿಷಯವಾಗಿದೆ ಎಂದೂ ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News