ಕೊಲ್ಲರಕೋಡಿ: ಸಂಪೂರ್ಣ ಹದಗೆಟ್ಟ ರಸ್ತೆ ದುರಸ್ತಿಗೊಳಿಸಿದ ಇಬ್ಬರು ಯುವಕರು

Update: 2019-08-24 03:46 GMT

ನರಿಂಗಾನ, ಆ.24: ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಕೊಲ್ಲರಕೋಡಿಯಿಂದ ಕೋಡಿಗೆ ಹೋಗುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಡಾಂಬರ್, ಜಲ್ಲಿಕಲ್ಲು, ಮಣ್ಣು ಕಿತ್ತು ಹೋಗಿವೆ. ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ. ರಸ್ತೆಯಲ್ಲಿರುವ ಹೊಂಡ-ಗುಂಡಿಗಳು ವಾಹನ ಸವಾರರ ಜೀವಕ್ಕೆ ಕಂಟಕವಾಗಿದ್ದು, ಇದನ್ನು ಮನಗಂಡ ಊರಿನ ಇಬ್ಬರು ಯುವಕರು ಶ್ರಮದಾನದ ಮೂಲಕ ರಸ್ತೆ ದುರಸ್ತಿ ಮಾಡಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಗ್ರಾಮದ ಈ ರಸ್ತೆಯ ಅವ್ಯವಸ್ಥೆಯ ಬಗ್ಗೆ ಸ್ಥಳೀಯ ನಾಗರಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಆದರೂ ಗ್ರಾಪಂ ಇದರ ಬಗ್ಗೆ ದಿವ್ಯಮೌನ ವಹಿಸಿದೆ. ಇನ್ನಾದರೂ ಗ್ರಾಪಂ ಈ ಬಗ್ಗೆ ಗಮನಹರಿಸಿ, ರಸ್ತೆ ದುರಸ್ತಿ ಮಾಡಬೇಕಾಗಿ ಸ್ಥಳೀಯರು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News