ನಾಲ್ಕು ಮಹಡಿಯ ಕಟ್ಟಡ ಕುಸಿತ: ಭಾರಿ ಸಾವು- ನೋವು ?

Update: 2019-08-24 03:55 GMT

ಭಿವಂಡಿ (ಮಹಾರಾಷ್ಟ್ರ): ಇಲ್ಲಿನ ಶಾಂತಿನಗರ ಪ್ರದೇಶದಲ್ಲಿ ಶನಿವಾರ ನಸುಕಿನಲ್ಲಿ ನಾಲ್ಕು ಮಹಡಿ ಕಟ್ಟಡವೊಂದು ಕುಸಿದ ಪರಿಣಾಮ ಇಬ್ಬರು ಮೃತಪಟ್ಟು ಇತರ ಮೂರು ಮಂದಿ ಗಾಯಗೊಂಡಿದ್ದಾರೆ. 15ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ರಾಷ್ಟ್ರೀಯ ವಿಪತ್ತು ಸ್ಪಂದನೆ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದ ತಕ್ಷಣ ಸ್ಥಳಕ್ಕೆ ಧಾವಿಸಿ, ಅವಶೇಷಗಳಡಿ ಸಿಕ್ಕಿಹಾಕಿಕೊಂಡಿದ್ದ ಜನರನ್ನು ಹೊರತೆಗೆದು ಆಸ್ಪತ್ರೆಗಳಿಗೆ ಕರೆದೊಯ್ದಿದ್ದಾರೆ.

"ನಾವು ಕಟ್ಟಡ ಖಾಲಿ ಮಾಡಿದ್ದೆವು; ಆದರೆ ಕೆಲವರು ಅನುಮತಿ ಇಲ್ಲದೇ ಕಟ್ಟಡ ಪ್ರವೇಶಿಸಿದ್ದರು. ಈ ಸಂದರ್ಭದಲ್ಲಿ ಕಟ್ಟಡ ಕುಸಿದಿದೆ" ಎಂದು ಭಿವಂಡಿ- ನಿಝಾಮ್‌ಪುರ ಪಾಲಿಕೆ ಕಮಿಷನರ್ ಅಶೋಕ್ ರಣಕಂಭ್ ಹೇಳಿದ್ದಾರೆ.

"ನಾಲ್ಕು ಮಂದಿಯನ್ನು ರಕ್ಷಿಸಲಾಗಿದ್ದು, ಈ ಪೈಕಿ ಒಬ್ಬರು ಮೃತಪಟ್ಟಿದ್ದಾರೆ. ಕಟ್ಟಡ ಎಂಟು ವರ್ಷ ಹಳೆಯದಾಗಿದ್ದು, ಅಕ್ರಮವಾಗಿ ಇದನ್ನು ನಿರ್ಮಿಸಲಾಗಿತ್ತು. ಈ ಬಗ್ಗೆ ತನಿಖೆ ನಡೆಯುತ್ತಿದೆ" ಎಂದು ವಿವರಿಸಿದ್ದಾರೆ. ಅಗ್ನಿಶಾಮಕ ದಳ ಕೂಡಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News