ಕೇಂದ್ರ ಸರಕಾರ ನೆರೆ ಸಂತ್ರಸ್ತರನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕಿದೆ: ರಾಮಲಿಂಗಾ ರೆಡ್ಡಿ

Update: 2019-08-24 12:11 GMT

ಬಾಗಲಕೋಟೆ, ಆ.24: ನೆರೆಯಿಂದ ಜನ ಸಂಕಷ್ಟದಲ್ಲಿರುವಾಗ ಕೇಂದ್ರ ಸರಕಾರ ಪರಿಹಾರ ನೀಡದೆ ಮತ್ತಷ್ಟು ಕಷ್ಟಕ್ಕೆ ದೂಡುತ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಚಿಕ್ಕಸಂಶಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ರಾಜ್ಯದ ನೆರೆ ಪರಿಸ್ಥಿತಿಗೆ ಸ್ಪದಿಸಿಲ್ಲ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ಅಮಿತ್ ಶಾ ಬಂದು ವೈಮಾನಿಕ ಸಮೀಕ್ಷೆ ನಡೆಸಿ ಹೋಗಿದ್ದಾರೆ. ಆದರೆ, ಕೇಂದ್ರದಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇರಳಕ್ಕೆ ಬಂದು ಸಮೀಕ್ಷೆ ಮಾಡಿ ಅನುದಾನ ನೀಡಿದ ಮೋದಿಗೆ ಕರ್ನಾಟಕಕ್ಕೆ ಬರಲು ಏಕೆ ಸಾಧ್ಯವಾಗಲಿಲ್ಲ. 25 ಮಂದಿ ಸಂಸದರನ್ನು ಆಯ್ಕೆ ಮಾಡಿ ಕಳುಹಿಸಿದ್ದರೂ ರಾಜ್ಯಕ್ಕೆ ನೆರವು ಸಿಗಲಿಲ್ಲ ಎಂದರೆ ಇದನ್ನು ಯಾವ ರೀತಿ ವಿಶ್ಲೇಷಿಸಬೇಕು. ರಾಜ್ಯದ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಲು ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದರು.

ಸಿದ್ದರಾಮಯ್ಯ ಮತ್ತು ದೇವೇಗೌಡರು ಪರಸ್ಪರ ಆರೋಪ, ಪ್ರತ್ಯಾರೋಪ ಮಾಡಿಕೊಳ್ಳುತ್ತಿರುವ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಮಳೆ ನಿಂತರೂ ಮರದ ಹನಿ ನಿಲ್ಲುವುದಿಲ್ಲ ಎಂಬಂತೆ ಅವರಿಬ್ಬರ ನಡುವೆ ಮಾತುಕತೆಗಳು ನಡೆಯುತ್ತಿರುತ್ತವೆ. ಸಮ್ಮಿಶ್ರ ಸರಕಾರ ಪತನಗೊಳ್ಳಲು ಬೇರೆ ಬೇರೆ ಕಾರಣಗಳಿವೆ. ಸಮಯ ಸಿಕ್ಕಾಗಲೆಲ್ಲಾ ಅವುಗಳನ್ನು ಹೇಳುತ್ತಾ ಬಂದಿದ್ದೇನೆ.

- ರಾಮಲಿಂಗಾರೆಡ್ಡಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News