ಸರಗಳ್ಳತನ ಪ್ರಕರಣ: 8 ಆರೋಪಿಗಳ ಬಂಧನ, 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

Update: 2019-08-24 14:29 GMT

ಬೆಂಗಳೂರು, ಆ.24: ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುತ್ತಿದ್ದ ಆರೋಪ ಪ್ರಕರಣ ಸಂಬಂಧ ಪುಲಕೇಶಿನಗರ ಠಾಣೆ ಪೊಲೀಸರು 8 ಯುವಕರನ್ನು ಬಂಧಿಸಿ 12 ಲಕ್ಷ ರೂ. ಮೌಲ್ಯದ 420ಗ್ರಾಂ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

ಸೆಯ್ಯದ್ ಮೊಹ್ಸೀನ್, ಅಬ್ದುಲ್, ಯೂಸುಫ್, ಇರ್ಫಾನ್, ಮುಜಾಹಿದ್ ಹಾಗೂ ಕಾನೂನು ಸಂಘರ್ಷಕೊಳ್ಳಗಾದ ಬಾಲಕ ಸೇರಿ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ಬೆಳಗಿನ ಜಾವ ಹಾಗೂ ಸಂಜೆ ವೇಳೆ ವಾಯು ವಿಹಾರ ಮಾಡುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡಿದ್ದ ಆರೋಪಿಗಳು ಸಮಯ ಸಾಧಿಸಿ ಬೈಕ್‌ಗಳಲ್ಲಿ ಸುತ್ತಾಡುತ್ತಾ ಸರಗಳನ್ನು ಎಗರಿಸುತ್ತಿದ್ದುದು ವಿಚಾರಣೆ ವೇಳೆ ತಿಳಿದು ಬಂದಿದೆ.

ಆರೋಪಿಗಳ ಬಂಧನದಿಂದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಸರಗಳ್ಳತನ, ದರೋಡೆ, ಮೊಬೈಲ್ ಕಳ್ಳತನ ಸೇರಿ 17 ಪ್ರಕರಣಗಳು ಪತ್ತೆಯಾಗಿದ್ದು, ಈ ಸಂಬಂಧ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News