ಉಡುಪಿ ನಗರಸಭೆ: ಸಾರ್ವಜನಿಕ ಸಮಾಲೋಚನಾ ಕಾರ್ಯಾಗಾರ
Update: 2019-08-24 16:26 GMT
ಉಡುಪಿ, ಆ.24: ಅಮೃತ್, ಎ.ಡಿ.ಬಿ. ಅನುದಾನದ ನೆರನಲ್ಲಿ ಕ್ವಿಮಿಪ್ ಟ್ರಾಂಚ್-2 ಯೋಜನೆಯಡಿ ದಿನದ 24 ಗಂಟೆ ಕುಡಿಯುವ ನೀರು ಒದಗಿಸುವ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಮತ್ತು ಸದರಿ ಯೋಜನೆಗಳ ಅನುಷ್ಠಾನದಿಂದಾಗುವ ಸಾಮಾಜಿಕ ಪರಿಣಾಮಗಳ ಬಗ್ಗೆ ಅಭಿಪ್ರಾಯ ಪಡೆಯುವ ಉದ್ದೇಶದಿಂದ ಆ.26ರಂದು ಬೆಳಗ್ಗೆ 11 ಗಂಟೆಗೆ ಗೋಪಾಲಪುರ ವಾರ್ಡ್ನ ಸಭೆ ಗೋಪಾಲಪುರ ವೀರಭದ್ರ ದೇವಾಲಯದಲ್ಲಿ ಹಾಗೂ ಸಂಜೆ 4 ಗಂಟೆಗೆ ಸುಬ್ರಹ್ಮಣ್ಯ ನಗರ ವಾರ್ಡ್ ಸಭೆಯು ಪುತ್ತೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿದೆ.
ಸಾರ್ವಜನಿಕರು ಈ ಸಭೆಗೆ ಹಾಜರಾಗಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.