ಸ್ಕೂಟಿ ಢಿಕ್ಕಿ: ಪಾದಚಾರಿ ಮೃತ್ಯು

Update: 2019-08-24 16:38 GMT

ಕೋಟ, ಆ.24: ಸಾಲಿಗ್ರಾಮದ ಡಿವೈನ್ ಪಾರ್ಕ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆ.23ರಂದು ರಾತ್ರಿ ವೇಳೆ ಸ್ಕೂಟಿಯೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿ ಯಾಗಿದೆ.

ಮೃತರನ್ನು ಕಾರ್ಕಡ ಗ್ರಾಮದ ಚೇಂಪಿ ನಿವಾಸಿ ಶಿವರಾಮ ಆಚಾರ್ಯ (78) ಎಂದು ಗುರುತಿಸಲಾಗಿದೆ. ಸ್ಕೂಟಿ ಸವಾರ ಚಂದ್ರಶೇಖರ ಹೊಳ್ಳ ತೀವ್ರ ವಾಗಿ ಗಾಯಗೊಂಡು ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾಲಿಗ್ರಾಮದ ವಿಶ್ವಕರ್ಮ ಸಭಾಭವನದಲ್ಲಿರುವ ಚಿನ್ನದ ಅಂಗಡಿಯಲ್ಲಿ ಕೆಲಸ ಮುಗಿಸಿ ಸಂಜೆ 7ಗಂಟೆ ಸುಮಾರಿಗೆ ಮನೆಗೆ ನಡೆದುಕೊಂಡು ಹೋಗು ತ್ತಿದ್ದ ಶಿವರಾಮ ಆಚಾರ್ಯರಿಗೆ ಸಾಲಿಗ್ರಾಮದ ಕಡೆಯಿಂದ ಬ್ರಹ್ಮಾವರ ಕಡೆಗೆ ಬರುತ್ತಿದ್ದ ಸ್ಕೂಟಿ ಹಿಂದಿನಿಂದ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಶಿವರಾಮ ಆಚಾರ್ಯ ರಾತ್ರಿ 10:30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News