ಮಡಿಕೇರಿ: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Update: 2019-08-24 18:21 GMT

ಮಡಿಕೇರಿ, ಆ.24 : ಸೋಮವಾರಪೇಟೆ ಸಮೀಪದ ಹೊಸಳ್ಳಿ ಗ್ರಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಗ್ರಾಮದ ಹೊಳೆಯಲ್ಲಿ ಕಂಡುಬಂದ ಮೃತದೇಹ ಅದೇ ಗ್ರಾಮದ ಅಪ್ಪು ಎಂಬವರದ್ದು ಎಂದು ಸ್ಥಳೀಯರು ಪತ್ತೆಹಚ್ಚಿದ್ದಾರೆ. ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಸಂದರ್ಭ ಹೊಳೆಯಲ್ಲಿ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಸೋಮವಾರಪೇಟೆ ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ ಮತ್ತು ಠಾಣಾಧಿಕಾರಿ ಶಿವಶಂಕರ್ ಸೇರಿದಂತೆ ಸಿಬ್ಬಂದಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ. ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹವನ್ನು ಹೊರತೆಗೆದು ಸ್ಥಳದಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಮೃತ ಅಪ್ಪು ಅವರು ಪತ್ನಿ ಅಕ್ಕಮ್ಮ ಸೇರಿದಂತೆ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News