ಮಂಗಳೂರು: ಆ. 27ರಂದು ಎಸ್ಡಿಎಸಿಯು ವತಿಯಿಂದ ರಕ್ತದಾನ ಶಿಬಿರ

Update: 2019-08-25 09:28 GMT

ಮಂಗಳೂರು, ಆ. 25: ಸೋಶಿಯಲ್ ಡೆಮೊಕ್ರೆಟಿಕ್ ಟ್ರೇಡ್ ಯೂನಿಯನ್ (ಎಸ್ಡಿಟಿಯು) ಇದರ ಆಶ್ರಯದಲ್ಲಿರುವ  ಸೋಶಿಯಲ್ ಡೆಮೊಕ್ರೆಟಿಕ್ ಆಟೋ ಚಾಲಕರ ಯೂನಿಯನ್  (ಎಸ್ಡಿಎಸಿಯು) ಮಂಗಳೂರು ನಗರ ಸಮಿತಿ ಹಾಗೂ ವೆನ್ಲಾಕ್ ಜಿಲ್ಲಾಸ್ಪತ್ರೆ ಮಂಗಳೂರು ಇದರ ಸಹ ಭಾಗಿತ್ವದಲ್ಲಿ  ರಕ್ತ ಸಂಬಂಧಿಗಳಗೋಣ ಎಂಬ ಘೋಷ ವಾಕ್ಯದಲ್ಲಿ ಆ. 27ರಂದು ನೆಲ್ಲಿಕಾಯಿ ರಸ್ತೆಯಲ್ಲಿರುವ ವೆಸ್ಟ್ ಕೋಸ್ಟ್ ಬಿಲ್ಡಿಂಗ್ ನಲ್ಲಿ ರಕ್ತದಾನ ಶಿಬಿರ ನಡೆಯಲಿದೆ.

ಎಸ್ಡಿಎಸಿಯು  ಮಂಗಳೂರು ನಗರ ಸಮಿತಿ ಅಧ್ಯಕ್ಷ ಮಜೀದ್ ಉಳ್ಳಾಲ ಶಿಬಿರದ ಅಧ್ಯಕ್ಷತೆ ವಹಿಸಲಿದ್ದಾರೆ. ಎಸ್ಡಿಪಿಐ ಜಿಲ್ಲಾಧ್ಯಕ್ಷ ಅತಾವುಲ್ಲ ಜೋಕಟ್ಟೆ ಉದ್ಘಾಟನೆ ಮಾಡಲಿದ್ದಾರೆ.

ಎಸ್ಡಿಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಜಲೀಲ್ ಕೆ ಮುಖ್ಯ ಭಾಷಣ ಮಾಡಲಿದ್ದಾರೆ. ಎಸ್ಡಿಟಿಯು ಜಿಲ್ಲಾ ಸಂಚಾಲಕ ಜಾಬಿರ್ ಅರಿಯಡ್ಕ, ಎಸ್ಡಿಎಸಿಯು ಜಿಲ್ಲಾಧ್ಯಕ್ಷ ಖಾದರ್ ಫರಂಗಿಪೇಟೆ, ಎಸ್ಡಿಪಿಐ ಮಂಗಳೂರು ದಕ್ಷಿಣ ವಿಧಾನಸಭಾ ಅಧ್ಯಕ್ಷ ಸೊಹೈಲ್ ಖಾನ್, ಉತ್ತರ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ, ಮನಪಾ ಮಾಜಿ ಸದಸ್ಯ ಅಯಾಝ್ ಕೃಷ್ಣಾಪುರ, ಎಸ್ಡಿಎಸಿಯು ಜಿಲ್ಲಾ ಸಮಿತಿ ಸದಸ್ಯ ಮತ್ತು ಎಸ್ಡಿಟಿಯು  ಮಂಗಳೂರು ದಕ್ಷಿಣ ಸಂಚಾಲಕರು ನೌಫಲ್ ಕುದ್ರೋಳಿ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಎಸ್ಡಿಎಸಿಯು ಮಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಕನ್ನಂಗಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News