ಸಿದ್ದರಾಮಯ್ಯ ನನ್ನ ಮೊದಲ ಶತ್ರು ಎಂದು ಹೇಳಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ

Update: 2019-08-25 14:46 GMT

ಬೆಂಗಳೂರು, ಆ. 25: ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನ್ನ ಮೊದಲ ಶತ್ರು ಎಂದು ಹೇಳಿಲ್ಲ. ಈ ಬಗ್ಗೆ ಅನಗತ್ಯ ಗೊಂದಲ ಬೇಡ’ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ರವಿವಾರ ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ‘ಡಿಜಿಟಲ್ ಮಾಧ್ಯಮದ ಪತ್ರಕರ್ತರಿಗೆ ಕೆಲ ದಿನಗಳ ಹಿಂದೆ ನೀಡಿದ ಸಂದರ್ಶನವನ್ನು ಇಂದು ಕೆಲವು ವಿದ್ಯುನ್ಮಾನ ಮಾಧ್ಯಮಗಳು ತಿರುಚಿವೆ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆ ಮುನ್ನ ಬಿಜೆಪಿಗಿಂತ ನಮ್ಮ ಪಕ್ಷವನ್ನು ಹೆಚ್ಚು ಟೀಕಿಸುತ್ತಿದ್ದರು ಎಂದು ಹೇಳಿದ್ದೆ. ಆದರೆ ಸಿದ್ದರಾಮಯ್ಯ ಅವರು ನನ್ನ ಮೊದಲ ಶತ್ರು ಎಂದಿರಲಿಲ್ಲ.ಆ ಬಗ್ಗೆ ಅನಗತ್ಯ ಗೊಂದಲ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News