ಸಾಲ ನೀಡದ್ದಕ್ಕೆ ಬ್ಯಾಂಕ್ ವ್ಯವಸ್ಥಾಪಕನಿಗೆ ಕಪಾಳಮೋಕ್ಷ !

Update: 2019-08-25 14:46 GMT

ವಿಜಯಪುರ, ಆ.25: ಬ್ಯಾಂಕಿನಲ್ಲಿ ಸಾಲ ನೀಡಲು ತಡ ಮಾಡುತ್ತಿದ್ದ ಬ್ಯಾಂಕ್ ವ್ಯವಸ್ಥಾಪಕನೊರ್ವನ ಮೇಲೆ ಗ್ರಾಹಕರೊಬ್ಬರು ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜಿಲ್ಲೆಯ ಇಂಡಿ ತಾಲೂಕಿನ ಭತಗುಣಕಿ ಗ್ರಾಮದ ಕೆವಿಜಿ ಬ್ಯಾಂಕಿನಲ್ಲಿ ಈ ಘಟನೆ ನಡೆದಿದ್ದು, ಗ್ರಾಹಕ ಶರಣು ಎಂಬಾತ, ವ್ಯವಸ್ಥಾಪಕ ಬಿ.ವಿ. ಕುಲಕರ್ಣಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಹಲವು ದಿನಗಳಿಂದ ಶರಣು ಅವರು, ಸಾಲಕ್ಕಾಗಿ ಬ್ಯಾಂಕಿಗೆ ಹೋಗುತ್ತಿದ್ದರು. ಆದರೆ, ಬ್ಯಾಂಕ ವ್ಯವಸ್ಥಾಪಕ ಸಾಲ ನೀಡಿರಲಿಲ್ಲ ಎನ್ನುವ ಕಾರಣಕ್ಕೆ ಹಲ್ಲೆ ನಡೆಸಿದ್ದು, ಘಟನೆಯ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News