ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೆರೆ ಅಧ್ಯಯನ ನಡೆಸಲಿರುವ ಕೇಂದ್ರದ ತಂಡ : ಸಿಎಂ ಯಡಿಯೂರಪ್ಪ

Update: 2019-08-26 07:35 GMT

ಬೆಂಗಳೂರು: ನೆರೆ ಅಧ್ಯಯನ ಮಾಡಲು ಕೇಂದ್ರದ ತಂಡ ರಾಜ್ಯಕ್ಕೆ ಆಗಮಿಸಿದ್ದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಧ್ಯಯನ ನಡೆಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಎರಡು ದಿನದಲ್ಲಿ ಕೇಂದ್ರ ಸರಕಾರಕ್ಕೆ ವಿಸ್ತೃತ ವರದಿ ನೀಡಲಿದೆ. ಕೇಂದ್ರದಿಂದ ಹೆಚ್ಚಿನ ಮೊತ್ತದ ಪರಿಹಾರ ಸಿಗುವ ನಿರೀಕ್ಷೆ ಇದೆ. ಹಲವು ರಾಜ್ಯಗಳಲ್ಲಿ ನೆರೆ ಇದ್ದರೂ ಸಹ ನಮ್ಮ ರಾಜ್ಯಕ್ಕೆ ಮೊದಲು ಕೇಂದ್ರದ ಅಧ್ಯಯನ  ತಂಡ ಆಗಮಿಸಿದೆ ಎಂದು ಅವರು ಹೇಳಿದರು.

ಮಾಜಿ ಸಿಎಂ ಸಿದ್ದರಾಮಯ್ಯಅವರ ಮಾತಿಗೆ ಉತ್ತರ ಕೊಡಲ್ಲ. ಕೇಂದ್ರ ಸಕಾರಾತ್ಮಕ ವಾಗಿ ಸ್ಪಂದಿಸುತ್ತಿದೆ. ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗುವ ಅವಶ್ಯಕತೆ ಇಲ್ಲ. ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ ಪಟ್ಟಿ ರಾಜ್ಯಪಾಲರಿಗೆ ಕಳುಹಿಸಿದ್ದೇನೆ. ಸಂಜೆ ಒಳಗೆ ಖಾತೆ ಹಂಚಿಕೆ ಆಗಲಿದೆ ಎಂದು ಸಿಎಂ ಹೇಳಿದರು.

ಡಿಸಿಎಂ ಹುದ್ದೆ ಯಾರಿಗೆ ಕೊಡಬೇಕು ಎಂದು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದೂ ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News