Breaking News: ನೂತನ ಸಚಿವರಿಗೆ ಖಾತೆ ಹಂಚಿಕೆ: ಮೂವರಿಗೆ ಡಿಸಿಎಂ ಹುದ್ದೆ, ಬೊಮ್ಮಾಯಿಗೆ ಗೃಹ ಖಾತೆ
ಬೆಂಗಳೂರು, ಆ.26: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವ 17 ಮಂದಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಈ ಪೈಕಿ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವಥ್ ನಾರಾಯಣ ಹಾಗೂ ಲಕ್ಷ್ಮಣ ಸವದಿಗೆ ಉಪ ಮುಖ್ಯಮಂತ್ರಿ ಹುದ್ದೆಯನ್ನು ನೀಡಲಾಗಿದೆ.
ಗೋವಿಂದ ಕಾರಜೋಳ(ಉಪ ಮುಖ್ಯಮಂತ್ರಿ-1, ಲೋಕೋಪಯೋಗಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ), ಡಾ.ಸಿ.ಎನ್.ಅಶ್ವಥ್ ನಾರಾಯಣ(ಉಪ ಮುಖ್ಯಮಂತ್ರಿ-2, ಉನ್ನತ ಶಿಕ್ಷಣ, ಐಟಿ, ಬಿಟಿ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ), ಲಕ್ಷ್ಮಣ ಸವದಿ(ಉಪ ಮುಖ್ಯಮಂತ್ರಿ-3, ಸಾರಿಗೆ ಇಲಾಖೆ).
ಗೃಹ ಇಲಾಖೆ-ಬಸವರಾಜ ಬೊಮ್ಮಾಯಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ-ಕೆ.ಎಸ್.ಈಶ್ವರಪ್ಪ, ಕಂದಾಯ ಇಲಾಖೆ-ಆರ್.ಅಶೋಕ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ-ಜಗದೀಶ್ ಶೆಟ್ಟರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ- ಬಿ.ಶ್ರೀರಾಮುಲು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ-ಎಸ್.ಸುರೇಶ್ ಕುಮಾರ್, ವಸತಿ-ವಿ.ಸೋಮಣ್ಣ, ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ-ಸಿ.ಟಿ.ರವಿ, ಮುಜುರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ-ಕೋಟಾ ಶ್ರೀನಿವಾಸ ಪೂಜಾರಿ.
ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಇಲಾಖೆ -ಜೆ.ಸಿ.ಮಾಧುಸ್ವಾಮಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ-ಸಿ.ಸಿ.ಪಾಟೀಲ್, ಅಬಕಾರಿ ಇಲಾಖೆ-ಎಚ್.ನಾಗೇಶ್, ಪಶುಸಂಗೋಪನೆ ಇಲಾಖೆ-ಪ್ರಭು ಚೌವಾಣ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಶಶಿಕಲಾ ಜೊಲ್ಲೆಯವರಿಗೆ ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ.