ಕಾರು ಢಿಕ್ಕಿ: ಪಾದಾಚಾರಿ ಮೃತ್ಯು

Update: 2019-08-26 16:40 GMT

ಕೋಟ, ಆ.26: ಗುಂಡ್ಮಿ ಗ್ರಾಮದ ಸಾಲಿಗ್ರಾಮ ಮಹಾಲಸಾ ಆಯಿಲ್ ಮಿಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ವಿಜಯ್ ಎಂದು ಗುರುತಿಸಲಾಗಿದೆ. ಆ.25ರಂದು ರಾತ್ರಿ ವೇಳೆ ಸಾಸ್ತಾನ ಕಡೆಯಿಂದ ಸಾಲಿಗ್ರಾಮ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವಿಜಯರಿಗೆ ಬಿಳಿ ಬಣ್ಣದ ಕಾರೊಂದು ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾ ಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯ ಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಆ.26ರಂದು ಬೆಳಗಿನ ಜಾವ 3ಗಂಟೆ ಸುಮಾರಿಗೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರು.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News