ಮೈಸೂರು: ಯುವತಿಯ ಹತ್ಯೆ ಆರೋಪಿಗೆ ಗಲ್ಲು

Update: 2019-08-26 17:02 GMT

ಮೈಸೂರು,ಆ.16: 2014ರಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಮೈಸೂರಿನ 6ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ತೀರ್ಪು ನೀಡಿದೆ.

ಪ್ರಮೋದ್ ಕುಮಾರ್ 35 ಗಲ್ಲು ಶಿಕ್ಷೆಗೆ ಒಳಗಾದ ಆರೋಪಿ. ಮೂಲತಃ ಕೊಳ್ಳೆಗಾಲದ ಪ್ರಮೋದ್ 2014ರಲ್ಲಿ ಕೃತಿಕಾದೇವಿ ಎಂಬುವವರನ್ನ ಮೈಸೂರಿನ ಆರ್.ಟಿ ನಗರದ ಬಳಿ ಕೊಲೆ ಮಾಡಿದ್ದ. ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ಪ್ರಕರಣದ ವಿಚಾರಣೆ ನಡೆದು ತೀರ್ಪು ಹೊರಬಿದ್ದಿದೆ. ಮೈಸೂರಿನ 6ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಯಶ್ರೀಯವರು ಆರೋಪಿಗೆ ಗಲ್ಲುಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಸರ್ಕಾರದ ಪರ ಮಂಜುಳಾ ಅವರು ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News