ಅಕ್ರಮ ಗಣಿಗಾರಿಕೆ ಆರೋಪ: ಸಚಿವ ವಿ.ಸೋಮಣ್ಣ ವಿರುದ್ಧ ಎಸಿಬಿಗೆ ದೂರು

Update: 2019-08-26 17:07 GMT

ಬೆಂಗಳೂರು, ಆ.26: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವ ಸರಕಾರದ ನೂತನ ಸಚಿವ ವಿ.ಸೋಮಣ್ಣ ವಿರುದ್ಧ ಅಕ್ರಮ ಗಣಿಗಾರಿಕೆ ಆರೋಪದಲ್ಲಿ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಎಂಬುವರು ದೂರು ನೀಡಿದ್ದು, ಅಮರ್ ಸಿಂಗ್ ಎಂಬುವರ ಹೆಸರಿನಲ್ಲಿದ್ದ ಮಾತಾ ಮಿನರಲ್ಸ್ ಕಂಪೆನಿಯ ಮಾಲಕತ್ವ ಪಡೆಯದೇ, ಸಚಿವ ಸೋಮಣ್ಣ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಅಕ್ರಮ ಗಣಿಗಾರಿಕೆ ಪರಿಣಾಮ ಸರಕಾರದ ಬೊಕ್ಕಸಕ್ಕೆ ಸುಮಾರು 187 ಕೋಟಿ ತೆರಿಗೆ ವಂಚನೆ ಮಾಡಿದ್ದು, ಈ ಸಂಬಂಧ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಟಿ.ಜೆ.ಅಬ್ರಹಾಂ ಒತ್ತಾಯ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News