ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಪದಗ್ರಹಣ

Update: 2019-08-27 06:37 GMT

ಬೆಂಗಳೂರು, ಆ. 27: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳವಾರ ಬೆಂಗಳೂರಿನ  ಬಿಜೆಪಿಯ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಅವರಿಗೆ ನಿರ್ಗಮನ ಅಧ್ಯಕ್ಷ  ಹಾಗೂ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ  ಬಿಜೆಪಿ ಧ್ವಜ ನೀಡುವ ಮೂಲಕ  ಅಧಿಕಾರ  ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ನಳಿನ್ ಕುಮಾರ್ ಕಟೀಲ್ ರನ್ನು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದಿಸಿದರು. 

ಮಾಜಿ ಮುಖ್ಯ ಮಂತ್ರಿ ಜಗದೀಶ್ ಶೆಟ್ಟರ್  ಅವರು ನೂತನ ಅಧ್ಯಕ್ಷ ನಳಿನ್ ಕುಮಾರ್  ಕಟೀಲ್ ಅವರನ್ನು ಅಭಿನಂದಿಸಿ ಐದು  ನಿಮಿಷಗಳಲ್ಲಿ ತುರ್ತು ಕೆಲಸವಿದೆಯೆಂದು ಹೇಳಿ ತೆರಳಿದ್ದಾರೆ.

ಸಚಿವ ಶ್ರೀ ರಾಮಲು ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು. ಸಚಿವರು, ಸಂಸದರು, ಶಾಸಕರು, ಬಿಜೆಪಿಯ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು. 

ಬೆಳಗ್ಗೆ 9.30ಕ್ಕೆ ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ  ರಾಜ್ಯ ಕಚೇರಿಗೆ ನಳಿನ್ ಕುಮಾರ್  ಕಟೀಲ್ ಅವರ  ಕಚೇರಿಗೆ ಆಗಮಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News