ಪಕ್ಷದ ವಿರುದ್ಧ ನಡೆಯುವ ಪ್ರತಿಭಟನೆಯನ್ನು ಖಂಡಿಸುತ್ತೇನೆ: ಆರೋಗ್ಯ ಸಚಿವ ಬಿ.ಶ್ರೀರಾಮುಲು

Update: 2019-08-27 14:35 GMT

ಬೆಂಗಳೂರು, ಆ.27: ನನಗೆ ಅಸಮಾಧಾನವಾಗಿದೆ ಎಂದು ನಮ್ಮ ಪಕ್ಷದ ವಿರುದ್ಧ ನಡೆಯುತ್ತಿರುವ ಯಾವುದೇ ಪ್ರತಿಭಟನೆಯನ್ನು ನಾನು ಖಂಡಿಸುತ್ತೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಪಕ್ಷದ ವಿರುದ್ಧ ಯಾರು ಪ್ರತಿಭಟನೆಯನ್ನು ಮಾಡಬಾರದು ಎಂದು ನಾನು ಮನವಿ ಮಾಡುತ್ತೇನೆ. ಬಿಜೆಪಿ ಕಾರ್ಯಕರ್ತರಿಗೆ ಪಕ್ಷ ಮೊದಲು. ಪಕ್ಷದ ಎಲ್ಲ ತೀರ್ಮಾನಗಳಿಗೆ ನಾನು ಯಾವಾಗಲೂ ಬದ್ಧನಾಗಿರುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಇಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಪಕ್ಷದ ಕಚೇರಿಯಲ್ಲಿ ಭೇಟಿ ಮಾಡಿ ನನ್ನ ಶುಭಾಶಯಗಳನ್ನು ತಿಳಿಸಿದೆ. ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆಯ ಕೆಲಸ ಮಾಡಲಿದ್ದೇವೆ. ಅವರ ನೇತೃತ್ವದಲ್ಲಿ ಪಕ್ಷ ಇನ್ನಷ್ಟು ಬೆಳೆಯಲಿದೆ, ಶಕ್ತಿಯುತವಾಗಲಿದೆ ಎಂದು ಶ್ರೀರಾಮುಲು ಟ್ವೀಟರ್‌ನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News