ಕಡಬ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Update: 2019-08-28 10:02 GMT

ಕಡಬ, ಆ.28. ಇಲ್ಲಿನ ಕಳಾರ ಸಮೀಪದ ಅಡ್ಕಾಡಿ ಎಂಬಲ್ಲಿನ ತೋಟವೊಂದರಲ್ಲಿ ವ್ಯಕ್ತಿಯೋರ್ವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಕಳಾರ ಸಮೀಪದ ಅಡ್ಕಾಡಿ ನಿವಾಸಿ ಉಸ್ಮಾನ್ (60) ಎಂದು ಗುರುತಿಸಲಾಗಿದೆ.

ಅವರು ಮಂಗಳವಾರ ರಾತ್ರಿ 9 ಗಂಟೆಯ ಬಳಿಕ ಮನೆಯಿಂದ ನಾಪತ್ತೆಯಾಗಿದ್ದು, ಮನೆಯವರು ಇಂದು ಬೆಳಿಗ್ಗೆಯಿಂದ ಹುಡುಕಾಡುತ್ತಿದ್ದು,  ಮನೆಯ ರಬ್ಬರ್ ತೋಟದಲ್ಲಿ ಮರದ ಗೆಲ್ಲಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ದಿನಕರ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಳಿಕ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಡಬ ಆರೋಗ್ಯ ಕೇಂದ್ರದಲ್ಲಿ ನಡೆಸಲಾಯಿತು.

ಮೃತ ದೇಹವನ್ನು ಗಮನಿಸಿದಾಗ ಸಂಶಯ ಉಂಟಾಗುತ್ತಿದ್ದು ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಆರೋಪಿಸಿ ಮೃತರ ಪುತ್ರ ಅಬ್ದುಲ್ ಖಾದರ್ ಕಡಬ ಪೋಲಿಸರಿಗೆ ದೂರು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News