ಸಣ್ಣ ಕೈಗಾರಿಕಾ ಸಂಘದಿಂದ ನೆರೆ ಪರಿಹಾರಕ್ಕೆ ನೆರವು

Update: 2019-08-28 17:19 GMT

ಉಡುಪಿ, ಆ.28: ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸದಸ್ಯರು ಮುಖ್ಯಮಂತ್ರಿಗಳ ನೆರೆಪರಿಹಾರ ನಿಧಿಗೆ ಸಂಗ್ರಹಿಸಿದ 2,15,000ರೂ. ಆರ್ಥಿಕ ನೆರವನ್ನು ಇತ್ತೀಚೆಗೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಬಿಜಾಪುರ ಜಿಲ್ಲೆಯ ಗುಳೇದಗುಡ್ಡ ಹಾಗೂ ಬಾಳೆಹೊನ್ನೂರಿನ ನೆರೆ ಸಂತ್ರಸ್ತರಿಗೆ ಸುಮಾರು ಎರಡು ಲಕ್ಷ ರೂ. ಮೌಲ್ಯದ ಸಾಮಗ್ರಿಗಳನ್ನು ತಮ್ಮದೇ ವಾಹನದಲ್ಲಿ ಕಳುಹಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಐ.ಆರ್. ಫೆರ್ನಾಂಡೀಸ್, ಕಾರ್ಯದರ್ಶಿ ಎಂ.ವಸಂತ ಕಿಣಿ, ಖಜಾಂಚಿ ಹೃಷಿಕೇಶ್ ಹೆಗ್ಡೆ, ಮಾಜಿ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News