ಲಂಚ ಸ್ವೀಕರಿಸುತ್ತಿದ್ದಾಗ ಸಿಬಿಐ ಬಲೆಗೆ ಬಿದ್ದ ರೈಲ್ವೆ ಆರ್‌ಪಿಎಫ್ ಅಧಿಕಾರಿ

Update: 2019-08-29 04:20 GMT

ಚಿತ್ರದುರ್ಗ, ಆ.29: ಲಂಚ ಸ್ವೀಕರಿಸುತ್ತಿದ್ದಾಗ ಚಿತ್ರದುರ್ಗ ರೈಲ್ವೆ ಆರ್‌ಪಿಎಫ್ ಅಧಿಕಾರಿಯೊಬ್ಬರು ಸಿಬಿಐ ಬಲೆಗೆ ಬಿದ್ದ ಘಟನೆ ನಡೆದಿದೆ.

ಕೋಟೆನಾಡಿನಲ್ಲಿ ಸಿಬಿಐ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ರೈಲ್ವೆ ಆರ್‌ಪಿಎಫ್ ಅಧಿಕಾರಿ ಗುರುಸ್ವಾಮಿ ಎಂಬವರನ್ನು ಹಣ ಸಮೇತ ವಶಕ್ಕೆ ಪಡೆದಿದ್ದಾರೆ.

ಟೀ ಸ್ಟಾಲ್ ವ್ಯಾಪಾರಿಯಿಂದ ಎಂಟು ಸಾವಿರ ರೂ. ಲಂಚ ಸ್ವೀಕರಿಸುತ್ತಿರುವಾಗ ಸಿಬಿಐ ಡಿವೈಎಸ್ಪಿ ರಾಜು ನೇತೃತ್ವದಲ್ಲಿ ದಾಳಿ ನಡೆಸಿದ ತಂಡ ಗುರುಸ್ವಾಮಿಯನ್ನು ವಶಕ್ಕೆ ಪಡೆದಿದೆ.

ಈ ಬಗ್ಗೆ ಸಿಬಿಐ ಅಧಿಕಾರಿಗಳು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News