ಆ.30: ಕೈಕಂಬದಲ್ಲಿ ಪಿಎಫ್ಐ ವತಿಯಿಂದ ಸಾರ್ವಜನಿಕ ಸಭೆ
Update: 2019-08-29 06:12 GMT
ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ 'ನಿರ್ಭೀತಿಯಿಂದ ಜೀವಿಸಿ ಘನತೆಯಿಂದ ಜೀವಿಸಿ' ಎಂಬ ರಾಷ್ಟ್ರೀಯ ಅಭಿಯಾನದ ಪ್ರಯುಕ್ತ ಸಾರ್ವಜನಿಕ ಸಭೆ ಕೈಕಂಬ ಪ್ರೀಮಿಯರ್ ಹಾಲ್ ನಲ್ಲಿ ಆಗಸ್ಟ್ 30 ಶುಕ್ರವಾರ ಸಂಜೆ 4:30 ಕ್ಕೆ ಗಂಟೆಗೆ ನಡೆಯಲಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಮೊಹಿದಿನ್ ಹಳೆಯಂಗಡಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿ ಸದಸ್ಯ ಶಾಫಿ ಬೆಳ್ಳಾರೆ ಮುಖ್ಯ ಭಾಷಣ ಮಾಡಲಿದ್ದಾರೆ.
ಮುಖ್ಯ ಅತಿಥಿಯಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಆಲ್ ಇಂಡಿಯಾ ಕೌನ್ಸಿಲ್ ರಾಜ್ಯ ಕೋಶಾಧಿಕಾರಿ ರಫೀಕ್ ಧಾರಿಮಿ ಹಾಗು ಇನ್ನಿತರ ಸಾಮಾಜಿಕ, ರಾಜಕೀಯ, ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.