ಮಡಿಕೇರಿ: ಕಾರಿನ ಗಾಜು ಪುಡಿಗೈದ ಹುಚ್ಚ ವೆಂಕಟ್ ಗೆ ಸಾರ್ವಜನಿಕರಿಂದ ಹಲ್ಲೆ

Update: 2019-08-29 14:33 GMT

ಮಡಿಕೇರಿ, ಆ.29 : ನಟ ಹುಚ್ಚ ವೆಂಕಟ್ ಗೆ ಸಾರ್ವಜನಿಕರು ಹಲ್ಲೆ ನಡೆಸಿದ ಘಟನೆ ಮಡಿಕೇರಿ ನಗರದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.

ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ, ಮಾರುತಿ ಕಾರೊಂದಕ್ಕೆ ಹಾನಿಗೊಳಿಸಿದ ಕಾರಣಕ್ಕಾಗಿ ಅಸಮಾಧಾನಗೊಂಡ ಕೆಲವು ಯುವಕರು ವೆಂಕಟನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದರು ಎನ್ನಲಾಗಿದೆ.

ನಗರದ ಕೆಎಸ್‍ಆರ್‍ಟಿಸಿ ಬಸ್ ಡಿಪೋ ಬಳಿ ಇಂದು ಮಧ್ಯಾಹ್ನ ದಿಢೀರ್ ಆಗಿ ಪ್ರತ್ಯಕ್ಷವಾದ ಹುಚ್ಚ ವೆಂಕಟ್ ದಾರಿ ಬದಿಯಲ್ಲಿ ನಿಂತಿದ್ದರು. ಇವರನ್ನು ಗಮನಿಸಿದ ದಿಲೀಪ್ ಎಂಬ ಯುವಕ ನೀವು ಹುಚ್ಚ ವೆಂಕಟ್ ಅಲ್ವಾ ಎಂದು ಕುತೂಹಲದಿಂದ ಕೇಳಿದ್ದಾರೆ. ಇದರಿಂದ ಕೆರಳಿದ ವೆಂಕಟ್ “ಏನೋ ಗುರಾಯಿಸ್ತೀಯ” ಎಂದು ದಿಲೀಪ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತಪ್ಪಿಸಿಕೊಂಡು ಓಡುತ್ತಿದ್ದಂತೆ ಕುಪಿತಗೊಂಡ ವೆಂಕಟ್ ಯುವಕನ ಮಾರುತಿ-800 ಕಾರಿನ ಗಾಜನ್ನು ಪುಡಿ ಮಾಡಿದ್ದಾನೆ ಎನ್ನಲಾಗಿದೆ.

ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಹುಚ್ಚ ವೆಂಕಟ್ ಗೆ ಹಲ್ಲೆ ನಡೆಸಿದ್ದಾರೆ. ಸ್ಥಳಕ್ಕೆ ಬಂದ ನಗರ ಠಾಣಾ ಪೊಲೀಸರು ವೆಂಕಟನನ್ನು ಠಾಣೆಗೆ ಕರೆದೊಯ್ದು ಬುದ್ದಿ ಹೇಳಿದ್ದಾರೆ. 

  
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News