ಐಎಂಎ ಪ್ರಕರಣದ ಆರೋಪಿಯ ಜಾಮೀನು ಕೋರಿ ಅರ್ಜಿ: ಎಸ್‌ಐಟಿಗೆ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್

Update: 2019-08-29 17:58 GMT

ಬೆಂಗಳೂರು, ಆ.29: ಐಎಂಎ ಕಂಪೆನಿ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ ಶಿವಾಜಿನಗರದ ಹನೀಫ್ ಅಪ್ಸರ್ ಅಝೀಜ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಎಸ್‌ಐಟಿಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.

ಈ ಕುರಿತು ಅಜೀಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು. ಆರೋಪಿಯು ಸಮುದಾಯದ ಜನರ ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಐಎಂಎ ಕಂಪೆನಿಯಲ್ಲಿ ಹೂಡಿಕೆ ಮಾಡಲು ಪ್ರಚೋಧನೆ ಮಾಡುತ್ತಿದ್ದ. ಐಎಂಎ ಯಿಂದ ಎಚ್‌ಬಿಆರ್ ಲೇಔಟ್‌ನಲ್ಲಿ 3 ಕೋಟಿ ರೂ.ವೌಲ್ಯದ ಮನೆ ಪಡೆದಿದ್ದ ಆರೋಪಿ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅವರು ಅಜೀಜ್ ಅವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News