ಸಾರಿಗೆ ಇಲಾಖೆ ನಿಗಮಗಳ ಪರಿಶೀಲನಾ ಸಭೆ

Update: 2019-08-30 17:39 GMT

ಬೆಂಗಳೂರು, ಆ.30: ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿಯೊಂದಿಗೆ ಸಾರಿಗೆ ಇಲಾಖೆಯ ಕೆಎಸ್ಸಾರ್ಟಿಸಿ ಹಾಗೂ ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿಮಿಟೆಡ್‌ಗಳ ಪರಿಶೀಲನಾ ಸಭೆಯನ್ನು ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿಂದು ಆಯೋಜಿಸಲಾಗಿತ್ತು.

ಸಭೆಯಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ, ಸಾರಿಗೆ ಆಯುಕ್ತ ವಿ.ಪಿ.ಇಕ್ಕೇರಿ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ವಿ.ಪ್ರಸಾದ್, ಎನ್‌ಡಬ್ಲೂಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಎನ್‌ಇಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಹೀರಾ ನಸೀಮ್, ದೇವರಾಜ ಅರಸು ಟ್ರಕ್ ಟರ್ಮಿನಲ್‌ನ ವ್ಯವಸ್ಥಾಪಕ ನಿರ್ದೇಶಕ ಹಾಲಸ್ವಾಮಿ ಸೇರಿದಂತೆ ಹಲವರಿದ್ದರು.

ಪರಿಶೀಲನಾ ಸಭೆಗೂ ಮೊದಲು ಕೆಎಸ್ಸಾರ್ಟಿಸಿಯ ಅಂಬಾರಿ ಡ್ರೀಮ್ ಕ್ಲಾಸ್ ಬಸ್‌ಗಳನ್ನು ಉಪ ಮುಖ್ಯಮಂತ್ರಿಗೆ ಪರಿಚಯ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ದೇಶಕರು ಬಸ್‌ನ ವಿಶೇಷತೆಗಳ ಕುರಿತು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News