×
Ad

ಧರ್ಮಸ್ಥಳ: ಬಸ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Update: 2019-08-31 20:02 IST

ಬೆಳ್ತಂಗಡಿ: ಧರ್ಮಸ್ಥಳ ಸಮೀಪದ ನಿಡ್ಲೆ ಎಂಬಲ್ಲಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.

ಮೃತರನ್ನು ಬೆಂಗಳೂರು ರಾಜಾಜಿನಗರ ನಿವಾಸಿ ರೋಹಿತ್ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದರು ಎಂದು ತಿಳಿದುಬಂದಿದೆ.

ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News