ಗುಂಡ್ಲುಪೇಟೆ: ಹುಲಿ ದಾಳಿಗೆ ರೈತ ಬಲಿ

Update: 2019-09-01 04:13 GMT

ಗುಂಡ್ಲುಪೇಟೆ: ಹುಲಿ ದಾಳಿಗೆ ರೈತನೋರ್ವ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿಯೋಜನೆಯ ವ್ಯಾಪ್ತಿಯಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ  ಚೌಡಹಳ್ಳಿ  ಗ್ರಾಮದ ರೈತ  ಶಿವಮಾದಯ್ಯ (55) ಮೃತರು ಎಂದು ಗುರುತಿಸಲಾಗಿದೆ.ನಿನ್ನೆ ಸಂಜೆ  ಬಂಡೀಪುರ ಹುಲಿ ಯೋಜನೆಯ ಕುಂದಕೆರೆ ವಲಯದ ಬರಕಟ್ಟೆ ಸಮೀಪದ ಜಮೀನಿಗೆ ಕೃಷಿ‌ ಚಟುವಟಿಕೆಗೆ ತೆರಳಿ ವಾಪಸ್ಸು ಮನೆಗೆ ಬರುವಾಗ ಹುಲಿ ದಾಳಿ ನಡೆಸಿದೆನ್ನಲಾಗಿದೆ.

ಘಟನಾ ಸ್ಥಳದಲ್ಲಿ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News