ಬಾಗಲಕೋಟೆ: ವಿಚಿತ್ರ ಸ್ವಾಮೀಜಿ ಗ್ರಾಮದಿಂದ ಹೊರಕ್ಕೆ!

Update: 2019-09-01 11:58 GMT

ಬಾಗಲಕೋಟೆ, ಸೆ.1: ಕೆಲವೊಮ್ಮೆ ಪುರುಷ ಹಾಗೂ ಮಹಿಳೆಯಂತೆ ವಿಚಿತ್ರವಾಗಿ ವರ್ತನೆ ಮಾಡುತ್ತಿದ್ದ ಸ್ವಾಮೀಜಿಯೊರ್ವನನ್ನು ಇಲ್ಲಿನ ಚಿಕ್ಕಸಂಗಮದ ಗ್ರಾಮದಿಂದ ಹೊರಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

ಬೀಳಗಿ ತಾಲೂಕಿನ ಚಿಕ್ಕಸಂಗಮದಲ್ಲಿ ನೆಲೆಸಿದ್ದ ವಿದ್ಯಾಹಂಸ ಭಾರತಿ ಸ್ವಾಮೀಜಿ ಎಂಬಾತನನ್ನು ಹೊರ ಹಾಕಲಾಗಿದೆ ಎಂದು ವರದಿಯಾಗಿದೆ.

ಮೈಸೂರು ಜಿಲ್ಲೆ ಪಾಂಡವಪುರ ತಾಲೂಕಿನ ಚಂದ್ರಗ್ರಾಮದ ಬಳಿಯ ತ್ರಿಧಾಮಕ್ಷೇತ್ರ ಮಹಾಕಾಳಿ ಚಕ್ರೇಶ್ವರಿ ಪೀಠಾಧ್ಯಕ್ಷ ಈ ವಿದ್ಯಾಹಂಸ ಭಾರತಿ ಸ್ವಾಮೀಜಿ ಎನ್ನಲಾಗಿದ್ದು, ವಿಚಿತ್ರ ವೇಷ ಭೂಷಣ ಕಂಡು, ಗ್ರಾಮದಿಂದ ದೂರ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ಈ ವಿದ್ಯಾಹಂಸ ಭಾರತಿ ಸ್ವಾಮೀಜಿ ವಿರುದ್ಧ 2018ರಲ್ಲಿ ಮೈಸೂರಿನ ಕುವೆಂಪು ನಗರದ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು ಎಂದು ತಿಳಿದುಬಂದಿದೆ.

ಹೋಮ, ಹವನ ಹೆಸರಿನಲ್ಲಿ ಗ್ರಾಮಸ್ಥರಿಂದ ಚಿನ್ನಾಭರಣ ಮತ್ತು ಹಣ ಪಡೆದುಕೊಂಡಿದ್ದು, ಗಣ್ಯವ್ಯಕ್ತಿಗಳ ಜೊತೆಗಿನ ಭಾವಚಿತ್ರ ತೋರಿಸಿ ನಂಬಿಕೆ ಹುಟ್ಟಿಸಿಕೊಂಡಿದ್ದ ಎಂದು ಗ್ರಾಮಸ್ಥರು ಹೇಳುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News