ದಾವಣಗೆರೆ: ಬೈಕ್ಗೆ ಪಿಕಪ್ ಢಿಕ್ಕಿ; ಇಬ್ಬರು ಮೃತ್ಯು
Update: 2019-09-01 13:30 GMT
ದಾವಣಗೆರೆ: ಬೊಲೆರೂ ಪಿಕಪ್ ಬೈಕ್ಗೆ ಢಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿರುವ ಘಟನೆ ಚನ್ನಗಿರಿ ಸಮೀಪದ ಬೆಂಕಿಕೆರೆ ಬಳಿ ಶನಿವಾರ ರಾತ್ರಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರದ ಜ್ಞಾನೇಶ್ (28) ಹಾಗೂ ಚನ್ನಗಿರಿ ತಾಲೂಕಿನ ಲಕ್ಷ್ಮಿಸಾಗರದ ನಿವಾಸಿ ಸಂತೋಷ (29) ಮೃತಪಟ್ಟಿದ್ದಾರೆ.
ಮಧ್ಯರಾತ್ರಿ ಅಪಘಾತ ಸಂಭವಿಸಿದ್ದು, ಈ ಇಬ್ಬರನ್ನು ಅಸ್ಪತ್ರೆಗೆ ಸಾಗಿಸುತ್ತಿರುವಾಗಿ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.