ಕೋಮುದ್ವೇಷ ಹರಡುವ ಸಂದೇಶ ರವಾನಿಸಿದ ಆರೋಪ: ಉಳ್ಳಾಲ ನಿವಾಸಿಯ ಬಂಧನ

Update: 2019-09-01 15:40 GMT

ಉಳ್ಳಾಲ, ಸೆ.1: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಹರಡುವ ಸಂದೇಶ ರವಾನಿಸಿದ ಆರೋಪದಲ್ಲಿ ಉಳ್ಳಾಲ‌ ನಿವಾಸಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲ ನಿವಾಸಿ ಝಾಕಿರ್ ಬಂಧಿತ ಆರೋಪಿ.

ಝಾಕಿರ್ ವಾಟ್ಯಾಪ್ಸ್ ನಲ್ಲಿ ಕೋಮುದ್ವೇಷ ಬಿತ್ತುವ ಸಂದೇಶ ರವಾನಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಕೋಮು ದ್ವೇಷ ಬಿತ್ತುವ ಸಂದೇಶಗಳು ಇತ್ತು ಎಂದು ಆರೋಪಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಝಾಕಿರ್ ನನ್ನು ಬಂಧಿಸಲಾಗಿದೆ.

ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News