ಗಾಂಜಾ ಸೇವನೆ: ಮೂವರು ವಶಕ್ಕೆ
Update: 2019-09-01 21:31 IST
ಮಣಿಪಾಲ, ಸೆ.1: ಗಾಂಜಾ ಸೇವನೆಗೆ ಸಂಬಂಧಿಸಿ ಆ.31ರಂದು ಮಣಿಪಾಲದ ವಿದ್ಯಾರತ್ನ ನಗರದ ಪ್ರಿಮೀಯರ್ ಗ್ರೀನ್ವುಡ್ ಅಪಾರ್ಟ್ ಮೆಂಟ್ ಸಮೀಪ ಮೂವರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸ್ಥಳೀಯ ನಿವಾಸಿಗಳಾದ ರೋಹಿಲ್ ಚಟರ್ಜಿ(20), ಸಿದ್ಧಾಂತ್ ಸರತ್ ಮಲ್ಲಿಕ್(21), ಅನನ್ಯ ದೆವೇಶ್ ಮಾಥುರ್(21) ಎಂಬವರನ್ನು ವಶಕ್ಕೆ ಪಡೆದ ಪೊಲೀಸರು, ಮಣಿಪಾಲ ಕೆಎಂಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ಮುಂದೆ ಹಾಜರು ಪಡಿಸಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಇವರು ಗಾಂಜಾ ಸೇವಿಸಿರುವ ಬಗ್ಗೆ ದೃಢ ಪತ್ರ ನೀಡಿದ್ದಾರೆ.